ಬೆಂಗಳೂರು: ವಿಧಾನಸಭೆ ನಾಮಪತ್ರ ಸಲ್ಲಿಕೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿಯುಳಿದಿರುವ ಹಿನ್ನೆಲೆಯಲ್ಲಿ ಸೋಮವಾರ ಹಲವು ಬಿಜೆಪಿ ನಾಯಕರು ತಮ್ಮ ಉಮೇದುವಾರಿಕೆ ಘೋಷಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಮಲ್ಲೇಶ್ವರ ಕ್ಷೇತ್ರದಿಂದ ಅಶ್ವತ್ಥ್ ನಾರಾಯಣ್ ನಾಮಪತ್ರ ಸಲ್ಲಿಸಿದರೆ, ಚಿಕ್ಕಪೇಟೆ ಕ್ಷೇತ್ರದಿಂದ ಉದಯ್ ಗರುಡಾಚಾರ್ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಎಂ.ಕೃಷ್ಣಪ್ಪ ನಾಮಪತ್ರ ಸಲ್ಲಿಸಿದರು. ಬಸವನಗುಡಿ ಕ್ಷೇತ್ರದಿಂದ ರವಿಸುಬ್ರಹ್ಮಣ್ಯ ನಾಮಪತ್ರ ಸಲ್ಲಿಸಿದ್ದಾರೆ.



