Tuesday, July 8, 2025
Homeಚುನಾವಣೆ 2023ಮಂಗಳೂರು ಕಾಂಗ್ರೆಸ್ ಮುಖಂಡನಿಗೆ ಐಟಿ‌ ಶಾಕ್

ಮಂಗಳೂರು ಕಾಂಗ್ರೆಸ್ ಮುಖಂಡನಿಗೆ ಐಟಿ‌ ಶಾಕ್

ಕಾಂಗ್ರೆಸ್‌ ಮುಖಂಡ ವಿವೇಕ್ ರಾಜ್ ಎಂಬುವವರ ಮಂಗಳೂರು ನಗರದ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಮಣ್ಣಗುಡ್ಡದಲ್ಲಿರುವ ವಿವೇಕ್ ರಾಜ್ ಪೂಜಾರಿ ವಾಸ ಇರುವ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎರಡು ಕಾರುಗಳಲ್ಲಿ ಬಂದಿರುವ 8 ಮಂದಿ ಐಟಿ‌ ಅಧಿಕಾರಿಗಳು ದಾಳಿ ನಡೆಸಿದ್ದು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪನಾಮಾ ಸಂಸ್ಥೆಯ ಸಿಇಒ ಕೂಡ ಆಗಿರುವ ವಿವೇಕ್ ರಾಜ್ ಪೂಜಾರಿ ಹಲವಾರು ಉದ್ಯಮಗಳನ್ನು ನಡೆಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು.

ಹೆಚ್ಚಿನ ಸುದ್ದಿ