ಹೈದರಾಬಾದ್: ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಟ್ರಸ್ಟ್ ಗೆ ಹೈದರಾಬಾದ್ ನ ಭಕ್ತರೊಬ್ಬರು ಒಂದು ಕೋಟಿ ರೂಪಾಯಿ ದಾನ ನೀಡಿದ್ದಾರೆ.
ತಿರುಮಲ ದೇವಸ್ಥಾನದ ಟ್ರಸ್ಟ್ ಸದಸ್ಯರನ್ನು ಭೇಟಿಯಾದ ಎವಿಕೆ ಪ್ರಸಾದ್ ಎಂಬವರು ಡಿಮಾಂಡ್ ಡ್ರಾಫ್ಟ್ ರೂಪದಲ್ಲಿ ಒಂದು ಕೋಟಿ ರೂಪಾಯಿ ದಾನ ನೀಡಿದ್ದಾರೆ.
ಟ್ರಸ್ ಮೂಲಕ ನಡೆಯುವ ಚಟುವಟಿಕೆಗಳಿಗೆ ಈ ಹಣವನ್ನು ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡುವ ತಿರುಪತಿ ತಿರುಮಲ ದೇವಸ್ಥಾನ ದೇಶದಲ್ಲಿ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದು.
