ಬೆಂಗಳೂರು: ರಾಜ್ಯದ ಐಎಎಸ್ ಅಧಿಕಾರಿ ಡಾ. ಆಕಾಶ್ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ.
ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ. ಆಕಾಶ್ ವಿರುದ್ಧ ಅವರ ಪತ್ನಿ ವಂದನಾ, ಬೆಂಗಳೂರಿನ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿವೃತ್ತ ಡಿಐಜಿ ಪುತ್ರಿಯಾಗಿರುವ ವಂದನಾ ಅವರನ್ನು ಆಕಾಶ್ 2022ರಲ್ಲಿ ವಿವಾಹವಾಗಿದ್ದರು. ಆಗಲೆ ಸಾಕಷ್ಟು ವರದಕ್ಷಿಣೆ ಪಡೆದಿದ್ದ ಐಎಎಸ್ ಅಧಿಕಾರಿ ಆಕಾಶ್, ಇನ್ನಷ್ಟು ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ಅಷ್ಟೇ ಅಲ್ಲದೇ ವರದಕ್ಷಿಣೆ ನೀಡಲು ಒಪ್ಪದಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪತ್ನಿ ವಂದನಾ ಆರೋಪಿಸಿದ್ದಾರೆ.
ವಂದನಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು, ಪತಿ ಆಕಾಶ್, ಅವರ ತಂದೆ, ತಾಯಿ ಮತ್ತು ಸಹೋದರನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ
