ಅಥಣಿ ಬಿಜೆಪಿ ಟಿಕೆಟ್ ಮಹೇಶ್ ಕುಮಠಳ್ಳಿ ಪಾಲಾಗುತ್ತಿದ್ದಂತೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಪಕ್ಷ ತೊರೆಯುವ ಬಗ್ಗೆಯೂ ಚರ್ಚೆಗಳಾಗುತ್ತಿದೆ.
ಗುರುವಾರ ಲಕ್ಷ್ಮಣ್ ಸವದಿ ತಮ್ಮ ಬೆಂಬಲಿಗರ ಸಮಾವೇಶ ಆಯೋಜಿಸಿದ್ದು, ಸುಮಾರು 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಈ ಸಮಾವೇಶಕ್ಕೆ ಜಮಾಯಿಸಿದ್ದಾರೆ ಎಂದು ಅಂದಾಜಿಸಲಾಗಿದೆ.
ಮಧ್ಯಾಹ್ನ 3 ಗಂಟೆಗೆ ವೀರಶೈವ ವಿದ್ಯಾಪೀಠದಲ್ಲಿ ಈ ಸಮಾವೇಶ ಆಯೋಜನೆ ಮಾಡಿದ್ದು, ಬಿಜೆಪಿ ನಾಯಕರಿಗೆ ಈ ಮೂಲಕ ತನ್ನ ಶಕ್ತಿ ಪ್ರದರ್ಶನಕ್ಕೆ ಸವದಿ ಸಜ್ಜಾಗಿದ್ದಾರೆ. ರಾಜಿನಾಮೆ ಅಥವಾ ಪಕ್ಷೇತರ ಸ್ಪರ್ಧೆ ಬಗ್ಗೆ ಈ ಸಮಾವೇಶದಲ್ಲೇ ಸವದಿ ಘೋಷಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಗೊಂದಲವಿದ್ದು, ಡಿಕೆ ಶಿವಕುಮಾರ್ ಅಸಡ್ಡೆ ತೋರುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಮಾವೇಶದ ಮೂಲಕ ತನ್ನ ಶಕ್ತಿ ಪ್ರದರ್ಶನಕ್ಕೆ ಸವದಿ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
