Monday, August 3, 2026
Homeರಾಜ್ಯಮಳೆ ಕೊರತೆ: ರೈತರು ಆತಂಕಪಡುವ ಅಗತ್ಯವಿಲ್ಲ – ಶಾಸಕ ಸಿ. ಎಸ್. ನಾಡಗೌಡ

ಮಳೆ ಕೊರತೆ: ರೈತರು ಆತಂಕಪಡುವ ಅಗತ್ಯವಿಲ್ಲ – ಶಾಸಕ ಸಿ. ಎಸ್. ನಾಡಗೌಡ

ಮುದ್ದೇಬಿಹಾಳ, ಜು. 8: ಈ ಬಾರಿ ಮಳೆ ಪ್ರಮಾಣ ಅತೀ ಕಡಿಮೆಯಾಗಿರುವುದರಿಂದ ರೈತರಿಗೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆದರೆ ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ರೈತರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುವ ನಿರೀಕ್ಷೆಯಿದೆ. ಒಳಹರಿವು ಹೆಚ್ಚಾದ ತಕ್ಷಣ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೀರಿನ ಸಮರ್ಪಕ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಿ ಬೆಳೆಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ರೈತರು ಆತಂಕಕ್ಕೆ ಒಳಗಾಗದೆ ಧೈರ್ಯದಿಂದ ಇರಬೇಕು ಎಂದು ಶಾಸಕ ಸಿ. ಎಸ್. ನಾಡಗೌಡ ಮನವಿ ಮಾಡಿದರು.

ಹೆಚ್ಚಿನ ಸುದ್ದಿ